ADVERTISEMENT

ರೇವಣ್ಣ ಹೇಳಿಕೆಗೆ ಸುಮಲತಾ ಕಿಡಿ

​ಪ್ರಜಾವಾಣಿ ವಾರ್ತೆ
Published 8 ಮಾರ್ಚ್ 2019, 19:29 IST
Last Updated 8 ಮಾರ್ಚ್ 2019, 19:29 IST
   

ಮಂಡ್ಯ: ಸುಮಲತಾ ವಿರುದ್ಧ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನೀಡಿರುವ ಹೇಳಿಕೆಗೆ ಜಿಲ್ಲೆಯಾದ್ಯಂತ ವಿರೋಧ ವ್ಯಕ್ತವಾಗಿದೆ.

ಸಚಿವ ರೇವಣ್ಣ ಅವರ ಹೇಳಿಕೆಗೆ ಸುಮಲತಾ ಪ್ರತಿಕ್ರಿಯಿಸಿ ‘ಮಹಿಳೆಯರ ವಿರುದ್ಧ ಯಾರೂ ಹೀಗೆ ಮಾತನಾಡಬಾರದು.
ಹೆಣ್ಣನ್ನು ಪೂಜಿಸುವ ಸಂಸ್ಕೃತಿ ನಮ್ಮದು. ಅವರ ಹೇಳಿಕೆಗೆ ಇನ್ನೇನೂ ಹೇಳುವುದಿಲ್ಲ’ ಎಂದರು.

ದ್ವೇಷದ ರಾಜಕಾರಣ ಇಷ್ಟವಿಲ್ಲ. ಅಂಬರೀಷ್ ಯಾರನ್ನೂ ದೂಷಣೆ ಮಾಡದೇ ಪ್ರಾಮಾಣಿಕ ರಾಜಕಾರಣ ಮಾಡುವುದನ್ನು ತೋರಿಸಿಕೊಟ್ಟಿದ್ದಾರೆ. ಅವರ ಪ್ರಾಮಾಣಿಕ ಮಾರ್ಗ ಅಳವಡಿಸಿಕೊಂಡರೆ ಎಲ್ಲರಿಗೂ ಒಳಿತಾಗುತ್ತದೆ. ಯಾರು ಏನೇ ಮಾತನಾಡಿದರೂ ಅದ್ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಚೋದನಕಾರಿ ಹೇಳಿಕೆ ನೀಡಿ, ನನ್ನಿಂದ ಬೇರೆಯದೇ ಮಾತುಗಳನ್ನಾಡಿಸುವ ಯತ್ನ ಸಫಲವಾಗುವುದಿಲ್ಲ. ನನ್ನ ಆತ್ಮಸ್ಥೈರ್ಯ ಕುಗ್ಗಿಸಲು ಸಾಧ್ಯವಿಲ್ಲ’ ಎಂದು ಹೇಳಿದರು.

ADVERTISEMENT

ರೇವಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲೂ ವಿರೋಧ ವ್ಯಕ್ತವಾಗಿದೆ. ಅವರ ಮನೆಯಲ್ಲೂ ಮಹಿಳೆಯರು ಇದ್ದಾರೆ. ಹೆಣ್ಣನ್ನು ಗೌರವಿಸುವುದನ್ನು ಕಲಿಯಲಿ. ವಿವಿಧೆಡೆ ಶಾಸಕರು ಮೃತಪಟ್ಟಾಗ ಅವರ ಪತ್ನಿಯರಿಗೆ ಜೆಡಿಎಸ್‌ನಿಂದ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡಿರುವುದನ್ನು ರೇವಣ್ಣ ಮರೆತಿದ್ದಾರೆ ಎಂದು ಟೀಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.