ADVERTISEMENT

ರಾಜ್ಯಮಟ್ಟದ ಮಹಾತ್ಮರ ಜನ್ಮ ದಿನಾಚರಣೆ: ಸುನೀಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2022, 19:56 IST
Last Updated 23 ಮಾರ್ಚ್ 2022, 19:56 IST

ಬೆಂಗಳೂರು: ‘ಬಸವಣ್ಣ ಸೇರಿದಂತೆ ಎಲ್ಲ ಮಹಾತ್ಮರ ಜನ್ಮದಿನಾಚರಣೆಯನ್ನು ಮೊದಲ ಬಾರಿಗೆ ಬೆಂಗಳೂರಿನಲ್ಲಿ, ಬಳಿಕ ಬೇರೆ ಜಿಲ್ಲೆಗಳಲ್ಲಿ ರಾಜ್ಯಮಟ್ಟದ ಕಾರ್ಯಕ್ರಮವಾಗಿ ಆಚರಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದರು.

ವಿಧಾನಪರಿಷತ್‌ನಲ್ಲಿ ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಪ್ರಕಾಶ್ ರಾಥೋಡ್ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು ಈ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT