ADVERTISEMENT

ಬಿಜೆಪಿಗೆ ಬೆಂಬಲ; 12 ಕ್ಷೇತ್ರಕ್ಕೆ ಅರ್‌ಪಿಐ ಕೋರಿಕೆ: ವೆಂಕಟಸ್ವಾಮಿ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 19:15 IST
Last Updated 25 ಮಾರ್ಚ್ 2023, 19:15 IST
 ಡಾ.ಎಂ.ವೆಂಕಟಸ್ವಾಮಿ
ಡಾ.ಎಂ.ವೆಂಕಟಸ್ವಾಮಿ   

ಮೈಸೂರು: ‘ಕರ್ನಾಟಕದಲ್ಲಿ ಬಿಜೆಪಿ ಬೆಂಬಲಿಸಿ ಚುನಾವಣೆ ಎದುರಿಸಲು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಅಠವಳೆ) ನಿರ್ಧರಿಸಿದ್ದು, 10ರಿಂದ 12 ಸ್ಥಾನಗಳಿಗೆ ಬೇಡಿಕೆ ಮುಂದಿಟ್ಟಿದೆ’ ಎಂದು ಪಕ್ಷದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಾ.ಎಂ.ವೆಂಕಟಸ್ವಾಮಿ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯವನ್ನು ಕಾಂಗ್ರೆಸ್‌ ಮುಕ್ತಗೊಳಿಸುವುದು ನಮ್ಮ ಗುರಿ. 12 ಸ್ಥಾನಕ್ಕೆ ಬೇಡಿಕೆ ಇದ್ದು, ಬಿಜೆಪಿ ಜೊತೆ ಪಕ್ಷದ ಅಧ್ಯಕ್ಷ ರಾಮದಾಸ್‌ ಅಠವಳೆ ನೇತೃತ್ವದಲ್ಲಿ ಚರ್ಚೆ ನಡೆದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT