ADVERTISEMENT

ವಿನಯ್‌ ಕುಲಕರ್ಣಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 8:02 IST
Last Updated 11 ಆಗಸ್ಟ್ 2021, 8:02 IST
ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಸಾಂದರ್ಭಿಕ ಚಿತ್ರ
ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರ ಸಾಂದರ್ಭಿಕ ಚಿತ್ರ   

ನವದೆಹಲಿ: ಧಾರವಾಡಕ್ಕೆ ಭೇಟಿ ನೀಡದಿರುವುದೂ ಒಳಗೊಂಡಂತೆ ವಿವಿಧ ಷರತ್ತುಗಳನ್ನು ವಿಧಿಸಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರಿಗೆಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಮತ್ತು ಅಜಯ್ ರಸ್ತೋಗಿ ಅವರಿದ್ದ ಪೀಠ ಜಾಮೀನು ನೀಡಿದೆ.ಸಿಬಿಐ ಅಧಿಕಾರಿಗಳು ಕರೆದಾಗವಿಚಾರಣೆಗೆ ಹಾಜರಾಗಿ ಸಹಕರಿಸಬೇಕು ಎಂಬ ಷರತ್ತನ್ನೂ ವಿಧಿಸಲಾಗಿದೆ.

ಬಿಜೆಪಿ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಗೌಡರ್ ಕೊಲೆ ಪ್ರಕರಣದಲ್ಲಿವಿನಯ್ ಕುಲಕರ್ಣಿ ಸಿಬಿಐನಿಂದನವೆಂಬರ್ 5, 2020ರಂದುಬಂಧನಕ್ಕೆ ಒಳಗಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.