ADVERTISEMENT

ಹೈಕೋರ್ಟ್‌ ಅಭಿಪ್ರಾಯ: ಸುಪ್ರೀಂ ಕೋರ್ಟ್‌ನಲ್ಲಿ ನಾಳೆ ವಿಚಾರಣೆ

ಹೈಕೋರ್ಟ್‌ ಅಭಿಪ್ರಾಯದ ವಿರುದ್ಧ ಅಧಿಕಾರಿಗಳ ಮೇಲ್ಮನವಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2022, 17:54 IST
Last Updated 16 ಜುಲೈ 2022, 17:54 IST

ನವದೆಹಲಿ: ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿ ಉಪ ತಹಶೀಲ್ದಾರ್ ಜಾಮೀನು ಅರ್ಜಿಯ ವಿಚಾರಣೆಯ ವೇಳೆ ಹೈಕೋರ್ಟ್‌ ನ್ಯಾಯಮೂರ್ತಿ ಎಚ್‌.ಪಿ. ಸಂದೇಶ್‌ ಅವರ ಅಭಿಪ್ರಾಯಗಳ ವಿರುದ್ಧ ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್ ಸಿಂಗ್‌ ಹಾಗೂ ಐಎಎಸ್‌ ಅಧಿಕಾರಿ ಜೆ.ಮಂಜುನಾಥ್‌ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ನಡೆಯಲಿದೆ.

ಜಾಮೀನು ಅರ್ಜಿ ವಿಚಾರಣೆ ವೇಳೆ ತಮ್ಮ ಕಾರ್ಯವೈಖರಿ ಟೀಕಿಸಿದ್ದನ್ನು ಪ್ರಶ್ನಿಸಿ ಸೀಮಂತ್‌ ಕುಮಾರ್ ಸಿಂಗ್ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ನ್ಯಾಯಾಲಯವು ಮಂಗಳವಾರ ಮೇಲ್ಮನವಿಯ ವಿಚಾರಣೆ ನಡೆಸಿ, ಮೂರು ದಿನಗಳ ಕಾಲ ಜಾಮೀನು ಅರ್ಜಿಯ ವಿಚಾರಣೆ ನಡೆಸದಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು.

ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿತ್ತು.

ADVERTISEMENT

ನ್ಯಾಯಮೂರ್ತಿ ಹೇಳಿಕೆಯನ್ನು ಪ್ರಶ್ನಿಸಿ ಜೆ.ಮಂಜುನಾಥ್ ಅವರೂ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಎಲ್ಲಾ ಮೇಲ್ಮನವಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಸಮ್ಮತಿ ಸೂಚಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.