ADVERTISEMENT

‘ರಾಜ್ಯ ಸರ್ಕಾರಕ್ಕೆ ಮೀಸಲಾತಿ ಕೊಡುವ ಪರಮಾಧಿಕಾರ’

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 21:56 IST
Last Updated 18 ಫೆಬ್ರುವರಿ 2021, 21:56 IST
ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹೋರಾಟ ಸಮಿತಿಯವರು ಮಾದನಾಯಕನಹಳ್ಳಿ ಗ್ರಾಮದಿಂದ ಗುರುವಾರ ಸಂಜೆ ಪಾದಯಾತ್ರೆ ಮುಂದುವರೆಸಿದರು.
ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹೋರಾಟ ಸಮಿತಿಯವರು ಮಾದನಾಯಕನಹಳ್ಳಿ ಗ್ರಾಮದಿಂದ ಗುರುವಾರ ಸಂಜೆ ಪಾದಯಾತ್ರೆ ಮುಂದುವರೆಸಿದರು.   

ಹೆಸರಘಟ್ಟ: ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2 ಎಗೆ ಸೇರಿಸುವಂತೆ ಒತ್ತಾಯಿಸಿ ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಮಾದನಾಯಕನಹಳ್ಳಿ ಗ್ರಾಮದ ಪದ್ಮಾವತಿ ಕಲ್ಯಾಣ ಮಂಟಪದಿಂದ ಗುರುವಾರ ಸಂಜೆ ಬೆಂಗಳೂರು ಕಡೆಗೆ ಸಾಗಿತು.

ಮಾಧ್ಯಮದೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ’ಸರ್ಕಾರವು ನಮ್ಮ ಬೇಡಿಕೆಗೆ ಸ್ಪಂದಿಸುವ ನಿರೀಕ್ಷೆ ಇದ್ದು, ನಮ್ಮ ಹೋರಾಟ ಯಶಸ್ಸು ಕಾಣಲಿದೆ‘ಎಂದರು.

’ರಾಜ್ಯ ಸರ್ಕಾರಕ್ಕೆ ಮೀಸಲಾತಿ ನೀಡುವ ಸಂಪೂರ್ಣ ಪರಮಾಧಿಕಾರ ಇದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ತಮ್ಮ ಪರಮಾಧಿಕಾರ ಉಪಯೋಗಿಸಿಕೊಂಡು ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಲಿ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.