ADVERTISEMENT

ಬಸವಾತ್ಮಜೆ ಪ್ರಶಸ್ತಿಗೆ ಸುಶೀಲಮ್ಮ ಆಯ್ಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 20:06 IST
Last Updated 10 ಜನವರಿ 2021, 20:06 IST
ಎಸ್.ಜಿ. ಸುಶೀಲಮ್ಮ
ಎಸ್.ಜಿ. ಸುಶೀಲಮ್ಮ   

ಬಾಗಲಕೋಟೆ: ಕೂಡಲಸಂಗಮದ ಬಸವ ಧರ್ಮ ಪೀಠವು ಮಾತೆ ಮಹಾದೇವಿ ಅವರ ಸ್ಮರಣಾರ್ಥ ನೀಡುವ ‘ಬಸವಾತ್ಮಜೆ ಪ್ರಶಸ್ತಿ’ಗೆ ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಮುಖ್ಯಸ್ಥೆ ಎಸ್.ಜಿ.ಸುಶೀಲಮ್ಮ ಅವರನ್ನು ಆಯ್ಕೆ ಮಾಡಲಾಗಿದೆ.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿವರ ಪ್ರಕಟಿಸಿದ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ, ಜನವರಿ 13 ರಂದು ಕೂಡಲಸಂಗಮ ದಲ್ಲಿ ನಡೆಯುವ ಶರಣ ಮೇಳದ ಉದ್ಘಾಟನಾ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರಶಸ್ತಿ ಪ್ರದಾನ ಮಾಡು ವರು ಎಂದು ತಿಳಿಸಿ ದರು.

ಪ್ರಶಸ್ತಿಯು ₹51 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಚಿತ್ರದುರ್ಗ ಮುರುಘಾಮಠದ ಶಿವಮೂರ್ತಿ ಶರಣರು ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯ ವಹಿಸಲಿದ್ದಾರೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.