ADVERTISEMENT

ಸಿದ್ದರಾಮಯ್ಯ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸುತ್ತೂರು ಶ್ರೀ

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2019, 10:27 IST
Last Updated 13 ಡಿಸೆಂಬರ್ 2019, 10:27 IST
   

ಬೆಂಗಳೂರು:ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನುಸುತ್ತೂರು ಶ್ರೀಗಳು ಭೇಟಿ ಮಾಡಿ ಆರೋಗ್ಯವಿಚಾರಿಸಿದರು.

ಮಲ್ಲೇಶ್ವರದ ವೆಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿದಸುತ್ತೂರು ಮಠದ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿಅವರು ಶೀಘ್ರಗುಣಮುಖರಾಗುವಂತೆ ಹಾರೈಸಿದರು. ಸಿದ್ದರಾಮಯ್ಯ ಆರೋಗ್ಯದಿಂದ ಇದ್ದು ಅವರನ್ನು ವಾರ್ಡ್‌‌ಗೆ ಸ್ಥಳಾಂತರಿಸಲಾಗಿದೆ. ಶಸ್ತ್ರ ಚಿಕಿತ್ಸೆಗೆ ಒಳಗಾದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ಸ್ವಾಮೀಜಿ ಅವರು ತಂದೆಯ ಆರೋಗ್ಯದ ಕುರಿತು ಧೈರ್ಯ ತುಂಬಿರುವುದಾಗಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಹಂಚಿಕೊಂಡಿದ್ದಾರೆ.

ಗುರುವಾರಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವರಾದ ಕೆ.ಎಸ್‌. ಈಶ್ವರಪ್ಪ, ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ನಾಯಕರಾದ ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿಗುಣಮುಖರಾಗಿರುವಂತೆ ಹಾರೈಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.