ADVERTISEMENT

ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಎಸ್.ವಿ. ರಾಮಚಂದ್ರ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 12:34 IST
Last Updated 6 ಆಗಸ್ಟ್ 2020, 12:34 IST

ಬೆಂಗಳೂರು: ಜಗಳೂರು ಶಾಸಕರಾದಎಸ್.ವಿ. ರಾಮಚಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದರು.

ನಂತರ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಭೆ ನಡೆಸಿ, ನಿಗಮದ ಕ್ರಿಯಾ ಯೋಜನೆ ಕುರಿತು ಚರ್ಚಿಸಿ, ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಭೂ ಒಡೆತನ, ಗಂಗಕಲ್ಯಾಣ, ಸ್ವಯಂ ಉದ್ಯೋಗ, ಮೈಕ್ರೋ ಕ್ರೆಡಿಟ್ ಯೋಜನೆ, ನಿರುದ್ಯೋಗಿ ಯುವಕ -ಯುವತಿಯರಿಗೆ ಉದ್ಯಮ ಶೀಲತಾ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು.

ಜಿಲ್ಲಾ ಪ್ರವಾಸ ಕೈಗೊಂಡ ಪ್ರಗತಿ ಪರಿಶೀಲನೆ ನಡೆಸಿ, ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೂ ಶ್ರಮಿಸಲಾಗುವುದು. ನಿಗಮದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಮುದಾಯದ ಏಳಿಗೆಗಾಗಿ ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ADVERTISEMENT

ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಹನುಮನರಸಯ್ಯಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.