ಧಾರವಾಡ: ತಾಲ್ಲೂಕಿನ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಭಾನುವಾರ ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಕುಂದಗೋಳ ಶಿವಾನಂದ ಮಠದ ಬಸವೇಶ್ವರ ಸ್ವಾಮೀಜಿ (51) ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟರು.
ಸ್ವಾಮೀಜಿ ಕಾರು ಚಾಲಕ ಶಂಕರಗೌಡ ಪಾಟೀಲ ಹಾಗೂ ಇನ್ನೊಂದು ಕಾರಿನಲ್ಲಿದ್ದ ಚಿಕ್ಕೋಡಿ ತಾಲ್ಲೂಕಿನ ಕಬ್ಬೂರು ಗ್ರಾಮದಮಹಾದೇವ ಕಾಡೇಶಗೋಳ, ಮಾರುತಿ ಕುಕನೂರ ಸಾವಿಗೀಡಾದವರು. ಬಸವೇಶ್ವರ ಸ್ವಾಮೀಜಿ ತಮ್ಮ ಮಠದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಧಾರವಾಡದ ಭಕ್ತರೊಬ್ಬರ ಕುಟುಂಬದ ಮದುವೆಗೆ ತೆರಳುತ್ತಿದ್ದರು. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.