ADVERTISEMENT

ತಬ್ಲೀಗ್ ಸಮಾವೇಶಕ್ಕೆ ಅವಕಾಶ ಕೊಟ್ಟವರು ಯಾರು: ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 12 ಮೇ 2020, 7:43 IST
Last Updated 12 ಮೇ 2020, 7:43 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಕೊರೊನಾ ಸೋಂಕು ತಬ್ಲೀಗ್ ಸದಸ್ಯರಿಂದ ಹರಡುತ್ತಿದೆ ಎಂದು ಆರೋಪಿಸುವುದರಲ್ಲಿ ಅರ್ಥವಿಲ್ಲ. ತಬ್ಲೀಗ್ ಸಮಾವೇಶ ನಡೆಸಲು ಅವಕಾಶ ಕೊಟ್ಟವರು ಯಾರು ಎಂದು ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಮೆರಿಕ, ಇಟಲಿಯಂತಹ ದೇಶಗಳಲ್ಲಿ ತಬ್ಲೀಗ್ ಸದಸ್ಯರಿದ್ದಾರೆಯೇ? ಅಲ್ಲಿ ಏಕೆ ಸೋಂಕು ಹರಡಿದೆ? ತಬ್ಲೀಗ್ ಸದಸ್ಯರ ವಿಚಾರದಲ್ಲಿ ರಾಜಕೀಯ ಮಾಡಲಾಗುತ್ತಿದೆ' ಎಂದು ಆರೋಪಿಸಿದರು.

ಸರ್ಕಾರ ಕೊರೊನಾ ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಸರ್ವ ಪಕ್ಷ ಸಭೆ ನಡೆಸಬೇಕು ಎಂದು ಒತ್ತಾಯಿಸಿದ ಮೇಲೆ ನಮ್ಮನ್ನು ಕರೆಸಿದರು. ನಾವು ಕಾರ್ಮಿಕರ ಬಸ್ ಟಿಕೆಟ್ ದರ ಕೊಡ್ತೇವೆ ಎಂದ ಮೇಲೆ ಸರ್ಕಾರ ಉಚಿತವಾಗಿ ಕಾರ್ಮಿಕರನ್ನು ಕರೆದೊಯ್ದಿದೆ. ಅಸಂಘಟಿತ ಕುಲಕಸುಬುದಾರರಿಗೆ ನೆರವು ನೀಡಲು ಸಹ ನಾವು ಹಾಕಿದ ಒತ್ತಡವೇ ಕಾರಣ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.