ADVERTISEMENT

ಶಾಸಕರ ವಿರುದ್ಧ ಕ್ರಮ ಕೈಗೊಳ್ಳಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2019, 20:03 IST
Last Updated 15 ಜುಲೈ 2019, 20:03 IST

ಬೆಂಗಳೂರು: ಕೆಲವು ಶಾಸಕರು ತಮ್ಮ ಹೊಣೆಗಾರಿಕೆ ಮರೆತು ರಾಜೀನಾಮೆ ಸಲ್ಲಿಸಿರುವುದಕ್ಕೆ ಆಕ್ಷೇಪ ವ್ಯಕ್ತಡಿಸಿ ಎಜುಕೇಷನ್‌ ರೈಟ್ಸ್‌ ಟ್ರಸ್ಸ್‌ (ಇಆರ್‌ಟಿ) ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದಿದ್ದು, ಇಂತಹ ಶಾಸಕರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಪ್ರಜಾಪ್ರಭುತ್ವ ಪದಕ್ಕೆ ಅರ್ಥ ಸಿಗುವಂತೆ, ಮತದಾರ ಪ್ರಭುವಿಗೆ ನ್ಯಾಯ ದೊರಕುವಂತೆ ಮಾಡಬೇಕು ಎಂದು ಆಗ್ರಹಿಸಿದೆ.

ಈ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಮತದಾರರಿಗೆ ಅವಮಾನ ಮಾಡುವ ಬದಲು, ರಾಜಕೀಯ ಜೀವನದಿಂದಲೇ ನಿವೃತ್ತಿಯಾಗುವುದು ಒಳಿತು. ಈ ನಿಟ್ಟಿನಲ್ಲೂ ಕ್ರಮ ಕೈಗೊಳ್ಳಬೇಕು ಎಂದು ಟ್ರಸ್ಟ್‌ನ ಟ್ರಸ್ಟಿ ಸಿ.ಸುರೇಶ್‌ ಕುಮಾರ್‌ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT