ADVERTISEMENT

ಪೌರತ್ವ ಕಾಯ್ದೆ ವಾಪಸ್ ಪಡೆಯಲಿ: ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್

ಪೌರತ್ವ (ತಿದ್ದುಪಡಿ) ಕಾಯ್ದೆ, ರಾಷ್ಟ್ರೀಯ ಪೌರತ್ವ ನೋಂದಣಿ: ಪರ–ವಿರೋಧದ ರ್‍ಯಾಲಿ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 20:04 IST
Last Updated 23 ಡಿಸೆಂಬರ್ 2019, 20:04 IST
ಕಾಯ್ದೆ ವಿರೋಧಿಸಿ ಚೆನ್ನೈನಲ್ಲಿ ಡಿಎಂಕೆ ನೇತೃತ್ವದಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ
ಕಾಯ್ದೆ ವಿರೋಧಿಸಿ ಚೆನ್ನೈನಲ್ಲಿ ಡಿಎಂಕೆ ನೇತೃತ್ವದಲ್ಲಿ ನಡೆದ ಪ್ರತಿಭಟನಾ ರ‍್ಯಾಲಿ   

ಚೆನ್ನೈ: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ತಮಿಳುನಾಡಿನಲ್ಲಿ ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ನೇತೃತ್ವದಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಯಿತು.

ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ, ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ ವೈಕೊ, ಟಿಎನ್‌ಸಿಸಿ ಅಧ್ಯಕ್ಷ ಕೆ.ಎಸ್. ಅಳಗಿರಿ ಮತ್ತು ವಿಸಿಕೆ ಮುಖ್ಯಸ್ಥ ತಿರುಮಾವಲವನ್ ಹಾಗೂ ಸಾವಿರಾರು ಕಾರ್ಯಕರ್ತರು ಜಾಥಾದಲ್ಲಿ ಪಾಲ್ಗೊಂಡಿದ್ದರು.‘ಪೌರತ್ವ ಕಾಯ್ದೆ ಜಾರಿಗೊಳಿಸುವ ಮೂಲಕ ಬಿಜೆಪಿ ಹಾಗೂ ಎಐಎಡಿಎಂಕೆ ಪಕ್ಷಗಳು ಮುಸ್ಲಿಮರು ಹಾಗೂ ಶ್ರೀಲಂಕಾ ತಮಿಳರಿಗೆ ದ್ರೋಹ ಬಗೆದಿವೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಮೋದಿಗೆ ಧಿಕ್ಕಾರ. ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಯತ್ನಿಸಬೇಡಿ. ಕೇಸರಿ ಧ್ವಜವನ್ನು ಬಳಸಿ ಬಹುತ್ವ ಭಾರತವನ್ನು ಮೂಲೆಗೆ ಸರಿಸಲು ಯತ್ನಿಸದಿರಿ. ಕಾಯ್ದೆಯನ್ನು ವಾಪಸ್ ಪಡೆಯಿರಿ’ ಎಂಬಿತ್ಯಾದಿ ಘೋಷಣೆಗಳು ಕೇಳಿಬಂದವು.ರ‍್ಯಾಲಿಗೆ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಿ, ಡ್ರೋನ್‌ಗಳನ್ನು ಬಳಸಿ ವಿಡಿಯೊ ಚಿತ್ರೀಕರಣ ಮಾಡುವಂತೆಮಾಡುವಂತೆ ಹೈಕೋರ್ಟ್ ಸರ್ಕಾರಕ್ಕೆ
ಸೂಚಿಸಿತ್ತು. ಐದು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ADVERTISEMENT

ಯೂತ್ ಲೀಗ್‌ ಪ್ರತಿಭಟನೆ: ಕೇರಳದಲ್ಲಿ ಪ್ರತಿಭಟನೆಯ ಕಾವು ಮುಂದುವರಿದಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ (ಐಯುಎಂಎಲ್) ಯುವ ಘಟಕ ಯೂತ್ ಲೀಗ್ ಸದಸ್ಯರು ಕೇರಳದಾದ್ಯಂತ ಅಂಚೆ ಕಚೇರಿಗಳ ಎದುರು ಪ್ರತಿಭಟನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.