ಬೆಂಗಳೂರು: ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವೆ ಸಾರಿಗೆ ಬಸ್ಗಳ ಸೇವೆ ಹೆಚ್ಚಿಸಲು ಎರಡೂ ರಾಜ್ಯಗಳ ಅಧಿಕಾರಿಗಳು ಮಂಗಳವಾರ ಮಾತುಕತೆ ನಡೆಸಿದರು.
ಕೆಎಸ್ಆರ್ಟಿಸಿ ಕೇಂದ್ರ ಕಚೇರಿಗೆ ಬಂದಿದ್ದ ಆಂಧ್ರಪ್ರದೇಶದ ಸಾರಿಗೆ ಸಂಸ್ಥೆಯ ಅಧಿಕಾರಿಗಳ ಜತೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್ ಅವರು ಸಾಧಕ–ಬಾಧಕಗಳ ಬಗ್ಗೆ ಸಮಾಲೋಚನೆ ನಡೆಸಿದರು. ತೆಲಂಗಾಣಕ್ಕೂ ಬಸ್ಗಳ ಸೇವೆ ವಿಸ್ತರಿಸುವ ಸಂಬಂಧ ಇತ್ತೀಚೆಗೆ ಅನ್ಬುಕುಮಾರ್ ಸಭೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.