ADVERTISEMENT

ಹಿರಿಯರ ಮಾತಿಗೆ ಬೆಲೆ ನೀಡಿ: ತನ್ವೀರ್‌

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 19:08 IST
Last Updated 5 ಜೂನ್ 2019, 19:08 IST
ತನ್ವೀರ್‌ ಸೇಠ್‌
ತನ್ವೀರ್‌ ಸೇಠ್‌   

ಮೈಸೂರು: ‘ಕಾಂಗ್ರೆಸ್‌ ಪಕ್ಷವನ್ನು ದುರುಪಯೋಗ ಪಡಿಸಿಕೊಳ್ಳುವವರು, ಬ್ಲ್ಯಾಕ್‌ಮೇಲ್‌ ಮಾಡುವವರಿಗೆ ಸಚಿವ ಸ್ಥಾನ ನೀಡಬಾರದು. ಅಂಥವರಿಗೆ ಪಕ್ಷ ಮಣೆ ಹಾಕಬಾರದು’ ಎಂದು ಶಾಸಕ ತನ್ವೀರ್‌ ಸೇಠ್‌ ಬುಧವಾರ ಇಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಮಲಿಂಗಾ ರೆಡ್ಡಿ, ರೋಷನ್‌ ಬೇಗ್ ಸೇರಿದಂತೆ ಹಿರಿಯ ನಾಯಕರ ಮಾತಿಗೆ ಪಕ್ಷ ಬೆಲೆ ನೀಡಬೇಕು. ಕೆಲಸ ಮಾಡುವವರನ್ನು ಗುರುತಿಸಬೇಕು. ಆದರೆ, ಒಬ್ಬರ ಮೇಲೊಬ್ಬರು ಟೀಕೆ ಮಾಡುವುದು ಸರಿಯಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT