ಮೈಸೂರು: ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಅವರನ್ನು ಕೊಲಂಬಿಯಾ ಏಷಿಯಾ ಅಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಆಸ್ಪತ್ರೆ ಮುಂದೆ ನೂರಾರು ಮಂದಿ ಜನರು ಸೇರಿದ್ದಾರೆ.
ಸೋಮವಾರ ಬೆಳಗ್ಗೆಯಿಂದಲೇ ಜನರು ಆಸ್ಪತ್ರೆಯತ್ತ ಧಾವಿಸುತ್ತಿದ್ದಾರೆ. ಹೀಗಾಗಿ ಕೊಲಂಬಿಯಾ ಏಷಿಯಾ ಆಸ್ಪತ್ರೆಯಆವರಣದಲ್ಲಿ ಜನಜಂಗುಳಿ ಹೆಚ್ಚಾಗುತ್ತಿದ್ದಂತೆ ಪೊಲೀಸರುಬಿಗಿ ಬಂದೋ ಬಸ್ತ್ ಕೈಗೊಂಡಿದ್ದಾರೆ.ಆಸ್ಪತ್ರೆಯ ಪ್ರವೇಶಕ್ಕೆ ಯಾರಿಗೂಅವಕಾಶ ನೀಡುತ್ತಿಲ್ಲ.
ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ನೂರಕ್ಕೂ ಅಧಿಕ ಪೊಲೀಸರು ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಎನ್.ಆರ್.ಮೊಹಲ್ಲಾ, ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ಉದಯಗಿರಿ ಸೇರಿದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.