ಚಿತ್ರದುರ್ಗ: ಕೊರೊನಾ ಸೋಂಕು ನಿವಾರಣೆಗೆ ಇಷ್ಟಲಿಂಗ ಪೂಜೆ ಮಾಡುವಂತೆ ವೀರಶೈವ– ಲಿಂಗಾಯತ ಸಮುದಾಯಕ್ಕೆ ನೀಡಿರುವ ಕರೆಗೆ ಸಿರಿಗೆರೆಯ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದಾರೆ.
‘ಪ್ರಸ್ತುತ ಸಂದರ್ಭದಲ್ಲಿ ಇದೊಂದು ವಿಲಕ್ಷಣ ನಡೆಯೆಂದೇ ನಮ್ಮ ಭಾವನೆ. ಇದನ್ನು ನಾವು ಬಲವಾಗಿ ವಿರೋಧಿಸುತ್ತೇವೆ. ಇದೊಂದು ಸಂಕುಚಿತ ಮನೋಭಾವ ಎಂಬುದನ್ನು ಮನವರಿಕೆ ಮಾಡಿಕೊಡುವ ಅಗತ್ಯವಿದೆ. ಸಂಕುಚಿತ ಮನೋಭಾವವು ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆಯುಂಟು ಮಾಡುತ್ತದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ದೇಶದ ಪ್ರತಿಯೊಬ್ಬರೂ ತಮ್ಮ ಸಂಪ್ರದಾಯದ ಪ್ರಕಾರ ನಿತ್ಯವೂ ಪೂಜಾವಿಧಿಗಳನ್ನು ನೆರವೇರಿಸುತ್ತಾರೆ. ಇಂತಹ ಸಂದರ್ಭದಲ್ಲಿ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಈ ರೀತಿ ಕರೆ ನೀಡುವುದು ವಿಹಿತವಲ್ಲ. ಇದು ಪ್ರತ್ಯೇಕತಾ ಮನೋಭಾವನೆಯ ಸೂಚನೆ ಇಲ್ಲವೇ’ ಎಂದು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.