ಬೆಂಗಳೂರು: ನಗರದ ಕೆಲವು ಶೈಕ್ಷಣಿಕ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಗುರುವಾರ ಬೆಳ್ಳಂಬೆಳ್ಳಗೆ ದಾಳಿ ನಡೆಸಿದ್ದಾರೆ.
ನಗರದಲ್ಲಿರುವ ದಿವ್ಯಶ್ರೀ ಗ್ರೂಪ್, ರೇವಾ ಯೂನಿವರ್ಸಿಟಿ ಮತ್ತು ಕೃಷ್ಣದೇವರಾಯ ಇನ್ ಸ್ಟಿಟ್ಯೂಟ್ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು ಸುಮಾರು 45ಕ್ಕೂ ಹೆಚ್ಚು ಕಡೆ ಐಟಿ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಇದೆ.
ಆದಾಯ ತೆರಿಗೆ ವಂಚನೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಬೆಂಗಳೂರಿನ ದಿವ್ಯ ಶ್ರೀ ಗ್ರೂಪ್ನ ಹಲವು ಬ್ರಾಂಚ್ಗಳ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ವಿವರ ನೀಡಲು ಐಟಿ ಅಧಿಕಾರಿಗಳು ನಿರಾಕರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.