ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ ಟಿಡಿಆರ್ ವಿವಾದದ ವಿಚಾರಣೆಯನ್ನು ಸೆಪ್ಟೆಂಬರ್ 10ರ ನಂತರ ನಡೆಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ತಿಳಿಸಿದೆ.
15.36 ಎಕರೆಗೆ ₹3,400 ಕೋಟಿಯ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ಪ್ರಮಾಣಪತ್ರಗಳನ್ನು ಮೈಸೂರಿನ ರಾಜವಂಶಸ್ಥರಿಗೆ ಹಸ್ತಾಂತರಿಸುವಂತೆ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ನೀಡಿರುವ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದೆ. ಮುಖ್ಯ ಸಿವಿಲ್ ಮೇಲ್ಮನವಿ ವಿಚಾರಣೆಗೆ ಬಾಕಿ ಇದೆ. ವನಜಾಕ್ಷಿ ಎಂಬವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲರು ಕೋರಿದರು.
‘10ರ ನಂತರ ಎಲ್ಲ ಅರ್ಜಿಗಳ ವಿಚಾರಣೆ ನಡೆಸಲಾಗುವುದು‘ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ತಿಳಿಸಿತು.
ರಾಜವಂಶಸ್ಥರಿಗೆ ಟಿಡಿಆರ್ ನೀಡಬೇಕೆಂದು ದ್ವಿಸದಸ್ಯ ಪೀಠದ ಆದೇಶವನ್ನು ತ್ರಿಸದಸ್ಯ ಪೀಠವು ಮೇ 29ರಂದು ಅಮಾನತುಗೊಳಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.