ADVERTISEMENT

ಕಾಲ್ಪನಿಕ ವೇತನ ಹೊರಟ್ಟಿ ವರದಿ ಜಾರಿಗೆ ಗಡುವು

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 18:56 IST
Last Updated 20 ಜೂನ್ 2019, 18:56 IST

ಬೆಂಗಳೂರು: ಶಿಕ್ಷಕರ ಕಾಲ್ಪನಿಕ ವೇತನಕ್ಕೆ ಸಂಬಂಧಿಸಿದಂತೆ ಬಸವರಾಜ ಹೊರಟ್ಟಿ ವರದಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಜುಲೈ 20ರೊಳಗೆ ನಿರ್ಧಾರಕ್ಕೆ ಬರಬೇಕು. ಇಲ್ಲವಾದರೆ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಂಘಟನೆಗಳ ಒಕ್ಕೂಟ ಎಚ್ಚರಿಸಿದೆ.

ಒಕ್ಕೂಟದ ಅಧ್ಯಕ್ಷ ಎಂ.ಪಿ.ಕರಬಸಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಎಚ್‌.ಕೆ.ಗುರವ ಅವರು ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿದ್ದು, ಸರ್ಕಾರ ವಿಳಂಬ ಧೋರಣೆ ಬಿಟ್ಟು, ವರದಿಯನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT