ADVERTISEMENT

ಮುರುಘಾ ಶರಣರ ವಿರುದ್ಧ ಪ್ರಕರಣಕ್ಕೆ ಪ್ರಚೋದನೆ: ಶಿಕ್ಷಕ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2022, 5:19 IST
Last Updated 10 ನವೆಂಬರ್ 2022, 5:19 IST
ಬಸವರಾಜೇಂದ್ರ
ಬಸವರಾಜೇಂದ್ರ    

ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪ್ರಕರಣ ದಾಖಲಿಸುವಂತೆ ಸಂತ್ರಸ್ತ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿದ ಆರೋಪದ ಮೇರೆ ಶಿಕ್ಷಕರೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಜುಂಜವಾಡಿ ನಿವಾಸಿ ಬಸವರಾಜೇಂದ್ರ ಪೊಲೀಸರ ವಶದಲ್ಲಿರುವ ಆರೋಪಿ. ಇವರು ಮಠದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿದ್ದರು.

ವಿದ್ಯಾರ್ಥಿನಿಯರಿಗೆ ಪ್ರಚೋದನೆ ನೀಡಿ ದೂರು ದಾಖಲಿಸಲಾಗಿದೆ ಎಂದು ಆರೋಪಿಸಿ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ಬುಧವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಮಠದ ಉದ್ಯೋಗಿ ಗಾಯತ್ರಿ ಹಾಗೂ ಒಡನಾಡಿ ಸೇವಾ ಸಂಸ್ಥೆ ವಿರುದ್ಧವೂ ದೂರು ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.