ADVERTISEMENT

ಶಾಲೆ ಅಭಿವೃದ್ಧಿಗೆ ₹8 ಲಕ್ಷ ಕೊಟ್ಟ ಶಿಕ್ಷಕ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 19:30 IST
Last Updated 19 ಜನವರಿ 2021, 19:30 IST
ಕಾರ್ಯಕ್ರಮವನ್ನು ಸಿದ್ದಲಿಂಗ ಶ್ರೀಗಳು ಉದ್ಘಾಟಿಸಿದರು. ಶಿಕ್ಷಕರ ಸಂಘದ ರಾಮಾಂಜಿನಪ್ಪ, ದಾನಿ ಶಿಕ್ಷಕ ಎನ್.ನಾಗರಾಜು, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಸಚಿವ ಸುರೇಶ್‌ಕುಮಾರ್‌, ಮಾಜಿ ಶಾಸಕ ಎಂ.ವಿ.ನಾಗರಾಜು ಇದ್ದಾರೆ.
ಕಾರ್ಯಕ್ರಮವನ್ನು ಸಿದ್ದಲಿಂಗ ಶ್ರೀಗಳು ಉದ್ಘಾಟಿಸಿದರು. ಶಿಕ್ಷಕರ ಸಂಘದ ರಾಮಾಂಜಿನಪ್ಪ, ದಾನಿ ಶಿಕ್ಷಕ ಎನ್.ನಾಗರಾಜು, ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಸಚಿವ ಸುರೇಶ್‌ಕುಮಾರ್‌, ಮಾಜಿ ಶಾಸಕ ಎಂ.ವಿ.ನಾಗರಾಜು ಇದ್ದಾರೆ.   

ನೆಲಮಂಗಲ: ಟೆಂಟ್‌ ಶಾಲೆಯಿಂದ ಆರಂಭವಾಗಿ ಸಕಲ ಸೌಕರ್ಯಗಳುಳ್ಳ ಶಾಲೆಯಾಗಿ ಪರಿವರ್ತನೆಯಾಗಿರುವುದು ಶ್ಲಾಘನೀಯ ಎಂದು ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದರು.

ಪಟ್ಟಣದ ಅಂಬೇಡ್ಕರ್‌ ನಗರದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ದುರಸ್ತಿಗೊಳಿಸಿದ ಕೊಠಡಿಗಳು, ಧ್ವಜಸ್ತಂಭ, ಕಾಂಪೌಂಡ್‌, ಶೌಚಾಲಯ ಉದ್ಘಾಟಿಸಿ ಮಾತನಾಡಿದರು.

ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ’ಶಿಕ್ಷಕ ನಾಗರಾಜು ಅವರು ಸ್ವಂತ ₹8 ಲಕ್ಷ ವೆಚ್ಚದಲ್ಲಿ ಶಾಲೆಯನ್ನು ನವೀಕರಿಸಿರುವುದು, ಶಿಕ್ಷಣ ಎಲ್ಲರಿಗೂ ಸಿಗಬೇಕು ಎನ್ನುವ ಕಾಳಜಿಯನ್ನು ತೋರಿಸುತ್ತದೆ. ಗುಡಿಸಿಲಿನಲ್ಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆತಂತಾಗಿದೆ‘ ಎಂದರು.

ADVERTISEMENT

ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಮಾತನಾಡಿ, ’ಸಿದ್ದಲಿಂಗ ಶ್ರೀಗಳ ಆಶಯದಂತೆ ಶಾಲೆಯನ್ನು ದತ್ತು ಪಡೆದು, ಅಭಿವೃದ್ಧಿಗೆ ₹5 ಲಕ್ಷ ನೀಡಲಾಗಿದೆ‘ ಎಂದರು.

ಮಾಜಿ ಶಾಸಕ ಎಂ.ವಿ.ನಾಗರಾಜು, ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಚ್‌.ಮಾರೇಗೌಡ, ಬಿಎಂಟಿಸಿ ನಿರ್ದೇಶಕ ಕೆ.ಪಿ.ಭೃಂಗೇಶ್‌, ತಹಶೀಲ್ದಾರ್‌ ಕೆ.ಮಂಜುನಾಥ್‌, ದಾನಿ ಶಿಕ್ಷಕ ಎನ್‌.ನಾಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.