ADVERTISEMENT

ಶಿಕ್ಷಕರ ಸಮಸ್ಯೆ : ಫೇಸ್‍ಬುಕ್ ಲೈವ್ ಚರ್ಚಾ ಕಾರ್ಯಕ್ರಮ ಇಂದು

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 20:00 IST
Last Updated 27 ಜೂನ್ 2020, 20:00 IST

ಬೆಂಗಳೂರು: ಅಖಿಲ ಭಾರತ ಶಿಕ್ಷಣ ಸಮಿತಿಯು ‘ಶಿಕ್ಷಣ ಸಮುದಾಯದ ಸಮಸ್ಯೆಗಳು ಹಾಗೂ ಪರಿಹಾರಗಳು' ಕುರಿತು ಚರ್ಚಾ ಕಾರ್ಯಕ್ರಮವನ್ನು ಫೇಸ್‍ಬುಕ್ ನೇರಪ್ರಸಾರದಲ್ಲಿಜೂನ್ 28ರಂದು ಸಂಜೆ 7ಕ್ಕೆ ಹಮ್ಮಿಕೊಂಡಿದೆ.

ಚರ್ಚೆಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಅಲ್ಲಮಪ್ರಭು ಬೆಟ್ಟದೂರು, ಅಜೀಂ ಪ್ರೇಮ್‍ಜೀ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಎ.ನಾರಾಯಣ ಹಾಗೂ ತಜ್ಞರು ಭಾಗವಹಿಸಲಿದ್ದಾರೆ.

ಆಸಕ್ತರು ಸಮಿತಿಯ ಫೇಸ್‍ಬುಕ್ ಪುಟದಲ್ಲಿ (Save Education Committee-Karnataka) ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.