ಬೆಂಗಳೂರು: ಶಿಕ್ಷಕರ ವರ್ಗಾವಣೆಯ ವೇಳಾಪಟ್ಟಿ ಪ್ರಕಟವಾಗಿದ್ದು, ಇದೇ 17ರಿಂದ ಪ್ರಕ್ರಿಯೆ ಆರಂಭವಾಗಲಿದೆ.
ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ಹುದ್ದೆಯಡಿ ವರ್ಗಾವಣೆಯಾದವರಿಗೆ ಈ ಬಾರಿ ಮೊದಲ ಆದ್ಯತೆ ಸಿಗಲಿದೆ.
ವರ್ಗಾವಣೆಗೆ ‘ಶಿಕ್ಷಕ ಮಿತ್ರ’ ಆ್ಯಪ್ನಲ್ಲಿ ನ. 30ರವರೆಗೆ ಅರ್ಜಿ ಸಲ್ಲಿಸಬಹುದು. ಡಿ. 1ರಿಂದ 11ರವರೆಗೆ ಪರಿಶೀಲನೆ, 15ರಂದು ಅರ್ಹ, ಅನರ್ಹರ ಪಟ್ಟಿ ಪ್ರಕಟಣೆ, 16ರಿಂದ 23ರವರೆಗೆ ಆಕ್ಷೇಪಣೆಗೆ ಅವಕಾಶ, 24ರಿಂದ 29ರವರೆಗೆ ಅನರ್ಹರಿಗೆ ಹೇಳಿಕೆ ನೀಡಲು ಅವಕಾಶ, ಡಿ. 31ರಂದು ಅರ್ಹರ ಅಂತಿಮ ಪಟ್ಟಿ ಪ್ರಕಟವಾಗಲಿದೆ. ಮೊದಲು ಜಿಲ್ಲೆಯ ಒಳಗೆ, ಬಳಿಕ ಜಿಲ್ಲೆಯ ಹೊರಗೆ ವಿಭಾಗದ ಒಳಗೆ, ನಂತರ ವಿಭಾಗದ ಹೊರಗಿನ ಅರ್ಜಿಗಳ ಕೌನ್ಸೆಲಿಂಗ್ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.