ADVERTISEMENT

ಮಹದಾಯಿ ವಿಚಾರದಲ್ಲಿ ನ್ಯಾಯಮಂಡಳಿ ತೀರ್ಮಾನವೇ ಅಂತಿಮ: ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 18:21 IST
Last Updated 30 ಜನವರಿ 2021, 18:21 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಕಾರವಾರ: ‘ಮಹದಾಯಿ ನದಿ ನೀರಿನ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಏನು ಬೇಕಾದರೂ ಹೇಳಲಿ, ಅದನ್ನು ತೀರ್ಮಾನ ಮಾಡಲು ನ್ಯಾಯಮಂಡಳಿಯಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಪ್ರಸಿದ್ಧಿಗೆ ಬರಲು ಯಾರು ಏನು ಬೇಕಾದರೂ ಹೇಳುತ್ತಾರೆ. ಯಾವ ಹೇಳಿಕೆಗೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಯಾರೋ ಒಬ್ಬ ಹೇಳಿದರೆ ಏನಾಗುತ್ತದೆ’ ಎಂದು ಪ್ರಶ್ನಿಸಿದರು.

‘ಮಹಾದಾಯಿ ನದಿ ನಮ್ಮ ತಾಯಿ, ಗೋವಾ ರಾಜ್ಯದ ಜೀವನದಿ. ಅದರಿಂದ ಕರ್ನಾಟಕಕ್ಕೆ ನೀರು ಕೊಡುವುದಿಲ್ಲ’ ಎಂದು ಪ್ರಮೋದ ಸಾವಂತ್ ಹೇಳಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.