ಬೆಂಗಳೂರು: ಕೋವಿಡ್ ಪರೀಕ್ಷೆಯ ಬಳಿಕ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢಪಟ್ಟಲ್ಲಿ ಅವರಿಗೆ ನೇರವಾಗಿ ವರದಿ ನೀಡುವಂತಿಲ್ಲ ಎಂದು ಆರೋಗ್ಯ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ವರದಿಯನ್ನು ನೇರವಾಗಿ ಸೋಂಕಿತ ವ್ಯಕ್ತಿ ಅಥವಾ ಕುಟುಂಬದ ಸದಸ್ಯರಿಗೆ ನೀಡಿದಲ್ಲಿ ಅವರ ಗುರುತು ಬಹಿರಂಗವಾಗುತ್ತದೆ. ರೋಗಿಯ ಗೌಪ್ಯತೆಗೆ ಚ್ಯುತಿ ಬರದಂತೆ ನೋಡಿಕೊಳ್ಳಬೇಕು. ಹಾಗಾಗಿ ವರದಿಯನ್ನು ಜಿಲ್ಲಾ ವಿಚಕ್ಷಣಾ ಅಧಿಕಾರಿ, ಕೋವಿಡ್ ವಿಚಕ್ಷಣಾ ಅಧಿಕಾರಿ, ಬಿಬಿಎಂಪಿ ಅಥವಾ ರಾಜ್ಯ ವಿಚಕ್ಷಣಾ ಘಟಕಕ್ಕೆ ಸಲ್ಲಿಸಬೇಕು. ಬಳಿಕ ಮುಂದಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿರ್ದೇಶಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.