ದಾವಣಗೆರೆ: ಜಿಲ್ಲೆಯ ವೈದ್ಯರೊಬ್ಬರುಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ನಗರದಲ್ಲಿ ಆಟೊ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡಿದೆ. ಈ ಸುದ್ದಿ ತಮ್ಮ ಗಮನಕ್ಕೆ ಬಂದ ಕೂಡಲೇ ಅವರನ್ನುಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟರ್ನಲ್ಲಿ ಮಾಹಿತಿ ನೀಡಿರುವ ಶ್ರೀರಾಮುಲು ಅವರು, ‘ಜಿಲ್ಲಾ ಆರ್ಸಿಹೆಚ್ ಅಧಿಕಾರಿ ಡಾ. ಎಂ.ಎಚ್. ರವೀಂದ್ರನಾಥ್ ಅವರು ದಾವಣಗೆರೆಯಲ್ಲಿ ಬದುಕು ನಿರ್ವಹಣೆಗಾಗಿ ಆಟೋ ಓಡಿಸುತ್ತಿದ್ದಾರೆ ಎಂಬ ಮಾಧ್ಯಮ ವರದಿಗಳು ಗಮನಕ್ಕೆ ಬಂದಕೂಡಲೇ ಈ ಬಗ್ಗೆ ಹಿರಿಯ ಅಧಿಕಾರಿಗಳಿಂದ ವರದಿ ಕೇಳಿದ್ದೆ.ಅಂತೆಯೇ ವರದಿ ಪರಿಶೀಲನೆ ಬಳಿಕ ರವೀಂದ್ರನಾಥ್ ಅವರನ್ನು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ನಿಯೋಜಿಸಲಾಗಿದೆ. ಹಗಲಿರುಳು ಶ್ರಮಿಸುವ ಎಲ್ಲಾ ವೈದ್ಯರ ಹಿತಾಸಕ್ತಿ ಕಾಪಾಡಲು ನಮ್ಮ ಸರ್ಕಾರ ಬದ್ಧ’ ಎಂದು ತಿಳಿಸಿದ್ದಾರೆ.
ಕುಂದವಾಡ ಸಮೀಪ ಮಹಾಲಕ್ಷ್ಮಿ ಲೇಔಟ್ನ ಡಾ.ಎಂ.ಎಚ್. ರವೀಂದ್ರನಾಥ್ ಅವರು ‘ಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೋಂದ ಜೀವ’ ಎಂದು ಆಟೊದ ಮೇಲೆ ಬರೆಸಿಕೊಂಡು ಆಟೊ ಚಾಲನೆ ಮಾಡಿ ಗಮನ ಸೆಳೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.