ADVERTISEMENT

ನಾಲ್ವರು ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2023, 10:53 IST
Last Updated 12 ಜುಲೈ 2023, 10:53 IST
ಐಪಿಎಸ್‌ ಅಧಿಕಾರಿಗಳ ವರ್ಗಾವಣೆ (ಪ್ರಾತಿನಿಧಿಕ ಚಿತ್ರ)
ಐಪಿಎಸ್‌ ಅಧಿಕಾರಿಗಳ ವರ್ಗಾವಣೆ (ಪ್ರಾತಿನಿಧಿಕ ಚಿತ್ರ)   

ಬೆಂಗಳೂರು: ಉಪ ಪೊಲೀಸ್‌ ಆಯುಕ್ತ ಡಾ ಅನೂಪ್‌ ಎ. ಶೆಟ್ಟಿ ಸೇರಿದಂತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಐಜಿಪಿ ಎಸ್.ಎನ್. ಸಿದ್ದರಾಮಪ್ಪ ಅವರನ್ನು ಬೆಳಗಾವಿಯ ಆಯುಕ್ತರ ಕಚೇರಿಯ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಅಪರಾಧ ದಾಖಲೆಗಳ ಬ್ಯೂರೊದ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವರ್ತಿಕಾ ಕಟಿಯಾರ್ ಅವರನ್ನು ಬೆಂಗಳೂರಿನಲ್ಲಿರುವ ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಈ ಸ್ಥಾನದಲ್ಲಿದ್ದ ಡಾ. ಡಿ.ಆರ್.ಸಿರಿ ಗೌರಿ ಅವರನ್ನು ಡಾ. ಅನೂಪ್ ಎ. ಶೆಟ್ಟಿ ಅವರ ಸ್ಥಾನಕ್ಕೆ (ಉಪ ಪೊಲೀಸ್‌ ಆಯುಕ್ತ) ವರ್ಗಾವಣೆ ಮಾಡಲಾಗಿದೆ.

ADVERTISEMENT

ಉಪ ಪೊಲೀಸ್‌ ಆಯುಕ್ತ (ಡಿಸಿಪಿ) ಡಾ. ಅನೂಪ್ ಎ. ಶೆಟ್ಟಿ ಅವರನ್ನು ಸೈಬರ್ ಅಪರಾಧ ತನಿಖಾ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.