ADVERTISEMENT

ಯೋಗೀಶಗೌಡ ಹತ್ಯೆ: ಸುಪಾರಿ ಹಂತಕರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2020, 11:42 IST
Last Updated 1 ಮಾರ್ಚ್ 2020, 11:42 IST
ಯೋಗೀಶಗೌಡ ಗೌಡರ್
ಯೋಗೀಶಗೌಡ ಗೌಡರ್   

ಬೆಂಗಳೂರು: ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶಗೌಡ ಗೌಡರ್ಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಪ್ರಕರಣದ ಸಂಬಂಧ ಆರು ಮಂದಿ ಸುಪಾರಿ ಹಂತಕರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಧಾರವಾಡ ಉಪನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧ ಪೊಲೀಸರು, ಆರು ಮಂದಿಯನ್ನು ಈಗಾಗಲೇ ಬಂಧಿಸಿದ್ದರು. ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಬಿಐ, ಈಗ ಪುನಃ ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಆರು ಜನ ಹತ್ಯೆಯಲ್ಲಿ ಪಾಲ್ಗೊಂಡಿದ್ದರೆಂಬ ಮಾಹಿತಿ ಹೊರಬಿದ್ದಿದೆ

‘ಆರೋಪಿಗಳನ್ನು ಧಾರವಾಡ ನ್ಯಾಯಾಲಯದ ಎದುರು ಹಾಜರುಪಡಿಸಲಿದ್ದೇವೆ’ ಎಂದು ಸಿಬಿಐ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.