ADVERTISEMENT

ನ್ಯಾಯಾಧೀಶರ ಮನೆಯಲ್ಲಿಯೇ ಕಳವು

₹4.80 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳರು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2019, 16:36 IST
Last Updated 15 ಡಿಸೆಂಬರ್ 2019, 16:36 IST

ಉಡುಪಿ: ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಸಿ.ಎಂ.ಜೋಶಿ ಅವರ ಮನೆಯಲ್ಲಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಈಚೆಗೆ ಕಳ್ಳರು ಕಳವು ಮಾಡಿದ್ದಾರೆ.

ಅಜ್ಜರಕಾಡಿನಲ್ಲಿರುವ ಜಿಲ್ಲಾ ನ್ಯಾಯಾಧೀಶರ ಕೃಷ್ಣಾನುಗ್ರಹ ನಿವಾಸಕ್ಕೆ ನ.28ರಂದು ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ₹4.80 ಲಕ್ಷ ಮೌಲ್ಯದ 138 ಗ್ರಾಂ ಚಿನ್ನವನ್ನು ಕದ್ದೊಯ್ದಿದ್ದಾರೆ.

ಚಿನ್ನವನ್ನು ಬ್ಯಾಂಕ್‌ ಲಾಕರ್‌ನಲ್ಲಿಡಲು ಕಪಾಟನ್ನು ತೆರೆದಾಗ ಕಳುವಾಗಿರುವುದು ಗಮನಕ್ಕೆ ಬಂದಿದ್ದು, ನ್ಯಾಯಾಧೀಶರ ಪತ್ನಿ ಶೈಲಜಾ ಜೋಷಿ ಅವರು ಭಾನುವಾರ ಉಡುಪಿ ನಗರಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.