ADVERTISEMENT

ಪೊಲೀಸ್ ಅಧಿಕಾರಿ ಮನೆಯಲ್ಲೇ ಕಳವು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2021, 9:14 IST
Last Updated 15 ಮಾರ್ಚ್ 2021, 9:14 IST
   

ಚಿತ್ರದುರ್ಗ: ಇಲ್ಲಿನ ಬಸವೇಶ್ವರ ನಗರದಲ್ಲಿರುವ ಪೊಲೀಸ್‌ ಇನ್‌ಸ್ಟೆಕ್ಟರ್‌ ಮೃತ್ಯುಂಜಯ ಅವರ ಮನೆಗೆ ನುಗ್ಗಿದ ಕಳ್ಳರು ₹ 60 ಸಾವಿರ ನಗದು ಹಾಗೂ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ್ದಾರೆ.

ಮೃತ್ಯುಂಜಯ ಅವರು ಕುಟುಂಬ ಸಹಿತ ಹೊರಗೆ ಹೋದಾಗ ಕಳವು ನಡೆದಿದೆ. ಭಾನುವಾರ ರಾತ್ರಿ ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಳವಾಗಿದ್ದ ಕಾರು, ಲಾಠಿ ಹಾಗೂ ಗುರುತಿನ ಚೀಟಿ ವೆಂಕಟೇಶ್ವರ ದೇಗುಲದ ಆವರಣದಲ್ಲಿ ಸೋಮವಾರ ಪತ್ತೆಯಾಗಿವೆ.

ಮಾರ್ಚ್‌ 13ರಂದು ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ. ಮನೆ ಮುಂಭಾಗದಲ್ಲಿದ್ದ ಕಾರನ್ನೂ ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ. ಕಾರಿನಲ್ಲಿದ್ದ ಲಾಠಿ, ಗುರುತಿನ ಚೀಟಿಯನ್ನು ಕಂಡು ಅನುಮಾನ ಬಂದಿದೆ. ಹೀಗಾಗಿ, ಕಾರು ಹಾಗೂ ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ವಸ್ತುಗಳನ್ನು ಬಿಟ್ಟು ಹೊಗಿದ್ದಾರೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.