ADVERTISEMENT

ಕಾರು ಇರುವವರ ಬಿಪಿಎಲ್ ಕಾರ್ಡ್ ರದ್ದು ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 4:09 IST
Last Updated 28 ಆಗಸ್ಟ್ 2022, 4:09 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಆನಂದಪುರ (ಶಿವಮೊಗ್ಗ ಜಿಲ್ಲೆ): ‘ಇನ್ನು ಮುಂದೆ ಕಾರು ಹೊಂದಿದವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿದರು.

ಮುರುಘಾ ಮಠದಲ್ಲಿ ಕಾರ್ಯಕ್ರಮ ವೊಂದರಲ್ಲಿ ಮಾತನಾಡಿದ ಅವರು, ‘ಈಗ ₹50,000 ಹಾಗೂ ₹ 1 ಲಕ್ಷಕ್ಕೂ ಹಳೆ ಕಾರುಗಳು ಸಿಗುತ್ತವೆ. ಗಾರೆ ಮಾಡುವವರು, ಮೀನು ಹಿಡಿಯುವವರೂ ಕಾರು ತೆಗೆದುಕೊಂಡು ಹೋಗುತ್ತಾರೆ. ಅಂತವರ ಕಾರ್ಡ್ ಸಹಿತ ರದ್ದಾಗಿರುವುದು ಸರಿಯಲ್ಲ’ ಎಂದರು.

‘ಈ ವಿಷಯವಾಗಿ ಶಾಸಕ ಎಚ್‌.ಹಾಲಪ್ಪ ಹರತಾಳು ಹಾಗೂ ನಾನು ಮುಖ್ಯಮಂತ್ರಿ ಬಳಿ ಚರ್ಚಿಸಿದ್ದೇವೆ. ಈ ಕಾನೂನಿನಿಂದ ಬಡವರು ಹೊಂದಿರುವ ಕಾರ್ಡ್ ರದ್ದಾಗುತ್ತದೆ. ಅವರ ಜೀವನಾಧಾರಕ್ಕೆ ತೊಂದರೆ ಆಗುತ್ತದೆ ಎಂದು ಮನವರಿಕೆ ಮಾಡಿದ್ದೇವೆ. ಬಡವರ ಮೇಲೆ ಕರುಣೆ ತೋರಿ ಸಿ.ಎಂ ಆದೇಶ ಹೊರಡಿಸುತ್ತಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.