ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2022, 11:22 IST
Last Updated 28 ಆಗಸ್ಟ್ 2022, 11:22 IST
ನಳಿನ್‌ ಕುಮಾರ್‌ ಕಟೀಲ್‌
ನಳಿನ್‌ ಕುಮಾರ್‌ ಕಟೀಲ್‌   

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆಯಿಂದ ನಳಿನ್‌ ಕುಮಾರ್‌ ಕಟೀಲ್‌ ಅವರನ್ನು ಬದಲಾವಣೆ ಮಾಡುವ ಕುರಿತು ಚರ್ಚೆಯೇ ನಡೆದಿಲ್ಲ. ಈ ಕುರಿತು ನನ್ನ ಗಮನಕ್ಕೆ ಯಾವುದೇ ವಿಷಯ ಬಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, ನಳಿನ್‌ ಕುಮಾರ್‌ ಅವರು ಮೂರು ವರ್ಷಗಳಿಂದ ರಾಜ್ಯದಲ್ಲಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಎಂಟರಿಂದ ಹತ್ತು ಬಾರಿ ರಾಜ್ಯ ಪ್ರವಾಸ ಮಾಡಿದ್ದಾರೆ. ಬೂತ್‌ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷವನ್ನು ಸಂಘಟನೆ ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯಿತಿ ಚುನಾವಣೆ, ವಿಧಾನ ಪರಿಷತ್‌ ಚುನಾವಣೆ ಎಲ್ಲವನ್ನೂ ನಳಿನ್‌ ನೇತೃತ್ವದಲ್ಲಿ ಪಕ್ಷ ಸಮರ್ಥವಾಗಿ ಎದುರಿಸಿದೆ. ಅವರ ನೇತೃತ್ವದಲ್ಲಿ ಪಕ್ಷ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಮುಂದೆಯೂ ಅವರ ನೇತೃತ್ವ ಪಕ್ಷಕ್ಕೆ ಇನ್ನಷ್ಟು ಬಲ ನೀಡಲಿದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.