ADVERTISEMENT

ರಾಜ್ಯದ ಒಂದಿಂಚೂ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 2 ಮೇ 2022, 7:34 IST
Last Updated 2 ಮೇ 2022, 7:34 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ರಾಜ್ಯದ ಗಡಿ ಬಗ್ಗೆ ಈಗಾಗಲೇ ಎಲ್ಲವೂ ನಿರ್ಣಯ ಆಗಿದೆ. ನಮ್ಮ‌ ನಿಲುವು ಸ್ಪಷ್ಟವಾಗಿದೆ. ನಾವು ಒಂದು ಇಂಚು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ‘ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗಡಿ ವಿಚಾರವಾಗಿ ಮಹಾರಾಷ್ಟ್ರ ಸಚಿವರು ನೀಡಿದ ಹೇಳಿಕೆ ಕುರಿತು ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಮಹಾರಾಷ್ಟ್ರ ರಾಜಕಾರಣ ಯಾವಾಗ ಇಕ್ಕಟ್ಟಿಗೆ ಸಿಲುಕುತ್ತದೊ ಆಗೆಲ್ಲ ಅವರು ಕರ್ನಾಟಕದ ಗಡಿ ವಿಚಾರ ತೆಗೆಯುತ್ತಾರೆ. ಅವರ ರಾಜಕೀಯ ಉಳಿವಿಗಾಗಿ ಭಾಷೆ, ಗಡಿ ವಿಚಾರವನ್ನು ಎತ್ತವುದು ಅತ್ಯಂತ ಸಣ್ಣತನ. ಅದನ್ನು ಅವರು ಕೈ ಬಿಡಬೇಕು ಎಂದು ನಾನು ಒತ್ತಾಯಿಸುತ್ತೇನೆ’ ಎಂದರು.

‘ಕನ್ನಡ ಮಾತನಾಡುವ ಹಲವಾರು ಪ್ರದೇಶ ಮಹಾರಾಷ್ಟ್ರದಲ್ಲೂ ಇದೆ. ಅದನ್ನು ಹೇಗೆ ತೆಗೆದುಕೊಳ್ಳಬೇಕು ಎಂದು ನಾವು ಯೋಚಿಸುತ್ತಿದ್ದೇವೆ‘ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.