ADVERTISEMENT

ನಾವು ಪಕ್ಷಕ್ಕೆ ಹಿಂದಿರುಗುವ ಪ್ರಶ್ನೆಯೇ ಇಲ್ಲ: ಅತೃಪ್ತರ ಪರ ವಿಶ್ವನಾಥ್ ಗುಡುಗು

​ಪ್ರಜಾವಾಣಿ ವಾರ್ತೆ
Published 26 ಜುಲೈ 2019, 5:47 IST
Last Updated 26 ಜುಲೈ 2019, 5:47 IST
ಎಚ್‌.ವಿಶ್ವನಾಥ್
ಎಚ್‌.ವಿಶ್ವನಾಥ್   

ಬೆಂಗಳೂರು:‘ನಾವು ವಾಪಾಸ್ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಅತೃಪ್ತ ಶಾಸಕರ ಪರವಾಗಿ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.

ಮೈತ್ರಿ ಸರ್ಕಾದ ಜೆಡೆಎಸ್‌ ಮತ್ತು ಕಾಂಗ್ರೆಸ್‌ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈನಲ್ಲಿ ತಂಗಿದ್ದಾರೆ.

‘ನಮ್ಮನ್ನು ಸಂಪರ್ಕಿಸಿ, ಮನವೊಲಿಸುವ ಧೈರ್ಯ ಯಾವ ನಾಯಕರಿಗೂ ಇಲ್ಲ’ ಎಂದು ವಿಶ್ವಾನಾಥ್‌ ಮೈತ್ರಿ ಸರ್ಕಾರದ ನಡೆಸಿದ ನಾಯಕರಿಗೆ ಶುಕ್ರವಾರ ಸವಾಲು ಹಾಕಿದ್ದಾರೆ.

ADVERTISEMENT

ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ವಿಶ್ವಾಸ ಗಳಿಸುವಲ್ಲಿ ಸಾಧ್ಯವಾಗದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ಕಳೆದುಕೊಂಡರು.

ಸರ್ಕಾರ ರಚನೆ ಉಮೇದಿನಲ್ಲಿರುವ ಬಿಜೆಪಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಸಂಜೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕೋರಿದರು. ರಾಜ್ಯಪಾಲರು ಸಂಜೆ 6ಕ್ಕೆ ಪ್ರಮಾಣ ಸ್ವೀಕರಿಸಲು ಅವಕಾಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.