ADVERTISEMENT

ಚಂಡಮಾರುತದಿಂದ ಅಪಾಯ ಉಪಶಮನಕ್ಕೆ ಯೋಜನೆ: ಟಿ. ನಾರಾಯಣಪ್ಪ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2018, 20:15 IST
Last Updated 12 ಅಕ್ಟೋಬರ್ 2018, 20:15 IST

ಬೆಂಗಳೂರು: ರಾಜ್ಯದ ಪಶ್ಚಿಮ ಕರಾವಳಿಯ ಸುಮಾರು 321 ಕಿ.ಮೀ ವಿಸ್ತಾರವಿರುವ ಕಡಲ ತೀರದಲ್ಲಿ ಕೇಂದ್ರ ಸರ್ಕಾರ ಹಾಗೂ ವಿಶ್ವಬ್ಯಾಂಕ್ ನೆರವಿನಿಂದ ಚಂಡಮಾರುತ ಅಪಾಯ ಉಪಶಮನ ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ವಿಭಾಗದ ಉಪ ಕಾರ್ಯದರ್ಶಿ ಟಿ. ನಾರಾಯಣಪ್ಪ ತಿಳಿಸಿದರು.

ಕಂದಾಯ ಇಲಾಖೆಯ ಆಶ್ರಯದಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ನಡೆದ ‘ಚಂಡಮಾರುತ ಮತ್ತು ಪ್ರವಾಹ ವಿಪತ್ತು ನಿರ್ವಹಣೆ' ಕಾರ್ಯಾಗಾರದಲ್ಲಿ ಮಾತನಾಡಿ, ‘ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾರವಾರ ಜಿಲ್ಲೆಗಳಲ್ಲಿ ಈ ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದರು.

‘ಈ ಯೋಜನೆಗೆ ವಿಶ್ವಬ್ಯಾಂಕ್‌ ನೆರವು ನೀಡಿದೆ. ರಾಜ್ಯ ಸರ್ಕಾರ ₹128 ಕೋಟಿ ಮಂಜೂರು ಮಾಡಿದೆ. ಎರಡನೇ ಹಂತದ ಯೋಜನೆಯನ್ನೂ ಅನುಷ್ಠಾನ ಮಾಡಲಾಗುತ್ತದೆ’ ಎಂದು ಅವರು ಹೇಳಿದರು.

ADVERTISEMENT

ವಿಪತ್ತು ನಿರ್ವಹಣಾ ತಜ್ಞ ಡಾ. ವಿಶ್ವನಾಥ್‌, ‘ಮಾನವ ನಿರ್ಮಿತ ಬರ ಮತ್ತು ನೆರೆಯಿಂದ ಹೆಚ್ಚು ವಿಪತ್ತುಗಳು ಸಂಭವಿಸುತ್ತಿವೆ’ ಎಂದು
ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.