ADVERTISEMENT

ಮಂಗಳೂರು: ಬಿಷಪ್‌ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2018, 19:30 IST
Last Updated 15 ಸೆಪ್ಟೆಂಬರ್ 2018, 19:30 IST
ಡಾ.ಪೀಟರ್‌ ಪಾವ್ಲ್‌ ಸಲ್ಡಾನಾ
ಡಾ.ಪೀಟರ್‌ ಪಾವ್ಲ್‌ ಸಲ್ಡಾನಾ   

ಮಂಗಳೂರು: ಮಂಗಳೂರು ಧರ್ಮಪ್ರಾಂತದ 14ನೇ ಧರ್ಮಾಧ್ಯಕ್ಷರಾಗಿ ರೆ.ಡಾಪೀಟರ್‌ ಪಾವ್ಲ್‌ಸಲ್ಡಾನಾ ಶನಿವಾರ ಇಲ್ಲಿ ಅಧಿಕಾರ ವಹಿಸಿಕೊಂಡರು.

ನಗರದ ರೊಜಾರಿಯೊ ಕೆಥೆಡ್ರಲ್‌ನಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಬಿಷಪ್‌ ಡಾ.ಅಲೋಶಿಯಸ್‌ ಪಾವ್ಲ್‌ ಡಿಸೋಜ ಅವರಿಂದ ದೀಕ್ಷೆ ಸ್ವೀಕರಿಸಿದರು. ಇವರು ಮೂಲತಃ ಕಿನ್ನಿಗೋಳಿಯವರು.

ಬಳಿಕ ಅವರು ಕನ್ನಡ, ತುಳು, ಇಟಾಲಿಯನ್, ಕೊಂಕಣಿ ಹಾಗೂ ಆಂಗ್ಲ ಭಾಷೆಯಲ್ಲಿ ಸಹಬಾಳ್ವೆಯ ಸಂದೇಶ ನೀಡಿದರು. 22 ವರ್ಷಗಳ ಬಳಿಕ ನಗರದಲ್ಲಿ ನಡೆದ ದೀಕ್ಷೆ ಸಮಾರಂಭ ಇದಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.