ಮಂಗಳೂರು: ಮಂಗಳೂರು ಧರ್ಮಪ್ರಾಂತದ 14ನೇ ಧರ್ಮಾಧ್ಯಕ್ಷರಾಗಿ ರೆ.ಡಾಪೀಟರ್ ಪಾವ್ಲ್ಸಲ್ಡಾನಾ ಶನಿವಾರ ಇಲ್ಲಿ ಅಧಿಕಾರ ವಹಿಸಿಕೊಂಡರು.
ನಗರದ ರೊಜಾರಿಯೊ ಕೆಥೆಡ್ರಲ್ನಲ್ಲಿ ನಡೆದ ಸಮಾರಂಭದಲ್ಲಿ ನಿಕಟಪೂರ್ವ ಬಿಷಪ್ ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಂದ ದೀಕ್ಷೆ ಸ್ವೀಕರಿಸಿದರು. ಇವರು ಮೂಲತಃ ಕಿನ್ನಿಗೋಳಿಯವರು.
ಬಳಿಕ ಅವರು ಕನ್ನಡ, ತುಳು, ಇಟಾಲಿಯನ್, ಕೊಂಕಣಿ ಹಾಗೂ ಆಂಗ್ಲ ಭಾಷೆಯಲ್ಲಿ ಸಹಬಾಳ್ವೆಯ ಸಂದೇಶ ನೀಡಿದರು. 22 ವರ್ಷಗಳ ಬಳಿಕ ನಗರದಲ್ಲಿ ನಡೆದ ದೀಕ್ಷೆ ಸಮಾರಂಭ ಇದಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.