ADVERTISEMENT

ಮೂರು ಜಿಲ್ಲೆಗಳ ಎಸ್‌ಪಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2021, 18:21 IST
Last Updated 1 ಏಪ್ರಿಲ್ 2021, 18:21 IST

ಬೆಂಗಳೂರು: ಶಿವಮೊಗ್ಗ , ದಕ್ಷಿಣ ಕನ್ನಡ ಮತ್ತು ಯಾದಗಿರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ವರ್ಗಾವಣೆಗೊಳಿಸಿ ಗುರುವಾರ ಆದೇಶ ಹೊರಡಿಸಲಾಗಿದೆ.

ಶಿವಮೊಗ್ಗ ಎಸ್‌ಪಿ ಹುದ್ದೆಯಲ್ಲಿದ್ದ 2012ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಕೆ.ಎಂ. ಶಾಂತರಾಜು ಅವರನ್ನು ಬೆಂಗಳೂರಿನ ಪೂರ್ವ ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾಯಿಸಿದ್ದು, ಈ ಹುದ್ದೆಯಲ್ಲಿದ್ದ ನಾರಾಯಣ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಎಸ್‌ಪಿ ಹುದ್ದೆಯಲ್ಲಿದ್ದ 2014ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್‌ ಅವರನ್ನು ಶಿವಮೊಗ್ಗ ಎಸ್‌ಪಿ ಹುದ್ದೆಗೆ ನೇಮಿಸಲಾಗಿದೆ.

ಯಾದಗಿರಿ ಎಸ್‌ಪಿ ಹುದ್ದೆಯಲ್ಲಿದ್ದ 2015ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಸೋನಾವಣೆ ಹೃಷಿಕೇಷ್‌ ಭಾಗವಾನ್‌ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.