ADVERTISEMENT

ಮೂವರು ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2021, 17:30 IST
Last Updated 21 ಏಪ್ರಿಲ್ 2021, 17:30 IST

ಬೆಂಗಳೂರು: ಹುದ್ದೆ ನಿರೀಕ್ಷೆಯಲ್ಲಿದ್ದ ರಾಜ್ಯ ಪೊಲೀಸ್‌ ಸೇವೆಯ ಎಸ್‌ಪಿ ದರ್ಜೆಯ ಮೂವರು ಪೊಲೀಸ್‌ ಅಧಿಕಾರಿಗಳಿಗೆ ಸ್ಥಳ ನಿಯುಕ್ತಿಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.

ಎಂ. ನಾರಾಯಣ ಅವರನ್ನು ರಾಜ್ಯ ಗುಪ್ತ ವಾರ್ತೆ ವಿಭಾಗದ ಭಯೋತ್ಪಾದನಾ ನಿಗ್ರಹ ಘಟಕಕ್ಕೆ, ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಕಲಬುರ್ಗಿ ಪೊಲೀಸ್‌ ತರಬೇತಿ ಶಾಲೆಯ ಉಪ ಪ್ರಾಂಶುಪಾಲರ ಹುದ್ದೆಗೆ ಮತ್ತು ಎಸ್‌. ಜಾಹ್ನವಿ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT