ADVERTISEMENT

ಯಡ್ರಾಮಿ: ಸಿಡಿಲು ಬಡಿದು ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2020, 14:01 IST
Last Updated 13 ಏಪ್ರಿಲ್ 2020, 14:01 IST
   

ಯಡ್ರಾಮಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಐನಾಪೂರ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ಕುರಿಗಾಹಿಗಳಾದ ಕಲ್ಲಪ್ಪ ಬಸಪ್ಪ ಪೂಜಾರಿ (25) ಮತ್ತು ಪರಮಾನಂದ ಪೂಜಾರಿ (26) ಎಂಬುವವರು ಮೃತಪಟ್ಟಿದ್ದಾರೆ.

ಗ್ರಾಮದ ಸಮೀಪದ ಹೊಲದಲ್ಲಿ ಕುರಿಗಳನ್ನು ಮೇಯಿಸುತ್ತಿದ್ದರು. ಭಾನುವಾರ ಸಂಜೆ ಗುಡುಗು ಸಹಿತ ಮಳೆಯಲ್ಲಿ ಸಿಡಿಲು ಬಡಿದು ಇಬ್ಬರೂ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರಿಗೆ ಗಾಯಗಳಾಗಿವೆ.

ಚೆಕ್ ವಿತರಣೆ: ಪ್ರಕೃತಿ ವಿಕೋಪ ನಿಧಿಯಡಿ ಕುರಿಗಾಹಿಗಳ ಕುಟುಂಬದ ಸದಸ್ಯರಿಗೆ ತಲಾ ₹ 4 ಲಕ್ಷ ಮೊತ್ತದ ಪರಿಹಾರದ ಚೆಕ್‌ಗಳನ್ನು ಶಾಸಕ ಡಾ.ಅಜಯಸಿಂಗ್ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.