ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಬಾಳೆಲೆ ಬಳಿಯ ಸುಳುಗೋಡು ಕೆರೆ ಬಳಿ ರಕ್ಷಿಸಿದ್ದ ಹುಲಿಯು ಮೈಸೂರು ಮೃಗಾಲಯಕ್ಕೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದೆ.
ಹುಲಿಯ ಸೊಂಟದ ಭಾಗದಲ್ಲಿ ಗಾಯವಾಗಿತ್ತು. ಸೋಂಕಿನಿಂದ ನಿಶಕ್ತಿಗೊಂಡು ಬಳಲುತ್ತಿತ್ತು ಎನ್ನಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯು ಸೆರೆ ಹಿಡಿಯಲು ಪ್ರಯತ್ನಿಸಿದಾಗಲೂ ಓಡಲು ಅದಕ್ಕೆ ಸಾಧ್ಯವಾಗಲಿಲ್ಲ. ಹೀಗಾಗಿ, ಚಿಕಿತ್ಸೆಗೆಂದು ಮೈಸೂರಿನ ಚಾಮುಂಡಿ ವನ್ಯಜೀವಿ ಸಂರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಸಾಗಿಸಲು ನಿರ್ಧರಿಸಲಾಗಿತ್ತು.
‘ಹುಲಿಯ ಸಾವಿಗೆ ಕಾರಣ ತಿಳಿದುಕೊಳ್ಳಲು ಅದರ ಅದರ ಅಂಗಾಂಗ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ’ ಎಂದು ನಾಗರಹೊಳೆ ವನ್ಯಜೀವಿ ವಿಭಾಗದ ಎಸಿಎಫ್ ಪ್ರಸನ್ನ ಕುಮಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.