ADVERTISEMENT

ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಬಾಕಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2022, 19:03 IST
Last Updated 12 ಮಾರ್ಚ್ 2022, 19:03 IST
   

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿಧಾಮವನ್ನು ‘ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಪ್ರದೇಶ’ ಎಂದು ಘೋಷಿಸುವ ಪ್ರಸ್ತಾವಕ್ಕೆ ಶುಕ್ರವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿಲ್ಲ.

ಈ ವನ್ಯಜೀವಿಧಾಮವನ್ನು ‘ಮಲೆ ಮಹದದೇಶ್ವರ ಹುಲಿ ಸಂರಕ್ಷಿತ ಪ್ರದೇಶ’ ಎಂದು ಘೋಷಿಸುವ ಪ್ರಸ್ತಾವ ಶುಕ್ರವಾರದ ಸಂಪುಟ ಸಭೆಯ ಮುಂದಿತ್ತು. ಸಭೆಯಲ್ಲಿ ಈ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಕೆಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಅನುಮೋದನೆ ನೀಡಿಲ್ಲ’ ಎಂದು ಮೂಲಗಳು ಹೇಳಿವೆ.

ಮಹದೇಶ್ವರ ಬೆಟ್ಟ, ಹನೂರು, ಯಡೆಯಾರಳ್ಳಿ ರಕ್ಷಿತ ಅರಣ್ಯವನ್ನು ಒಗ್ಗೂಡಿಸಿ 906 ಚದರ ಕಿ.ಮೀ ವಿಸ್ತೀರ್ಣವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸುವ ಪ್ರಸ್ತಾವ ಸರ್ಕಾರ ಮುಂದಿದೆ. 2018ರ ಹುಲಿಗಣತಿ ಸಂದರ್ಭದಲ್ಲಿ ರಾಜ್ಯ ಸರ್ಕಾರ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಇಲ್ಲಿ 18 ರಿಂದ 20 ಹುಲಿಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.