ಬೆಂಗಳೂರು: ‘ಟಿಪ್ಪು ಜಯಂತಿ ಆಚರಣೆಯನ್ನು ಪುನರ್ ಪರಿಶೀಲನೆ ಮಾಡಿ’ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಎರಡು ತಿಂಗಳ ಒಳಗಾಗಿ ಈ ಬಗ್ಗೆ ಕೂಲಂಕಷ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಿ.ಖಾಸಗಿಯಾಗಿ ಯಾರಾದರೂ ಆಚರಣೆ ಮಾಡಬಯಸಿದರೆ ಅವರಿಗೆ ಸೂಕ್ತ ರಕ್ಷಣೆ ಕೊಡಿ ಎಂದು ಸೂಚಿಸಿದೆ.
ಬೇರೆ ಪ್ರಮುಖರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸುವ ಬಗ್ಗೆ ಹಾಗೂ ಆ ಕುರಿತು ಕೈಗೊಳ್ಳಲಾಗಿರುವ ಆದೇಶಗಳ ಬಗ್ಗೆ ಹೆಚ್ಚುವರಿ ಆಕ್ಷೇಪಣೆ ಸಲ್ಲಿಸಿ ಎಂದು ನ್ಯಾಯಪೀಠ ಸರ್ಕಾರಕ್ಕೆ ನಿರ್ದೇಶಿಸಿದೆ.
ಅಂತಿಮ ವಿಚಾರಣೆಯನ್ನು 2020ರ ಜನವರಿ 20ಕ್ಕೆ ಮುಂದೂಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.