ADVERTISEMENT

ಟಿಪ್ಪು ಜಯಂತಿ ಮುಗಿದ ಅಧ್ಯಾಯ: ಪ್ರೇಮಾ ಕಾರ್ಯಪ್ಪ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2023, 20:52 IST
Last Updated 30 ಏಪ್ರಿಲ್ 2023, 20:52 IST
ಟಿಪ್ಪು ಜಯಂತಿ ರಾಜ್ಯದಲ್ಲಿ ಕಟ್ಟೆಚ್ಚರ
ಟಿಪ್ಪು ಜಯಂತಿ ರಾಜ್ಯದಲ್ಲಿ ಕಟ್ಟೆಚ್ಚರ   

ಮಡಿಕೇರಿ: ಟಿಪ್ಪು ಜಯಂತಿ ಆಚರಣೆ ಮುಗಿದ ಅಧ್ಯಾಯ ಎಂದು ಕಾಂಗ್ರೆಸ್‌ ನಾಯಕಿ ಪ್ರೇಮಾ ಕಾರ್ಯಪ್ಪ ತಿಳಿಸಿದರು.

‘ಭಾವನಾತ್ಮಕ ವಿಚಾರಗಳಿಂದ ಬದುಕಿಗೆ ಪ್ರಯೋಜನ ಆಗುವುದಿಲ್ಲ. ಇನ್ನಾದರೂ ನಾವು ಭಾವನಾತ್ಮಕ ವಿಚಾರಗಳನ್ನು ಬಿಟ್ಟು ಅಭಿವೃದ್ಧಿಯ ವಿಚಾರಗಳ ಕುರಿತು ಮಾತನಾಡಬೇಕು’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಯಾವುದೋ ಕಾಲದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿದರು ಎಂಬ ಕಾರಣಕ್ಕೆ ನಿರಂತರವಾಗಿ ಅದನ್ನೇ ಪ್ರಸ್ತಾಪಿಸುವುದು ಸರಿಯಲ್ಲ. ಮತ್ತೆ ಮತ್ತೆ ಅದನ್ನೇ ಕೆದಕುವ ಮೂಲಕ ಬಿಜೆಪಿ ಲಾಭ ಮಾಡಿಕೊಳ್ಳಲು ಯತ್ನಿಸುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.