ADVERTISEMENT

‘ಟಿಪ್ಪು ನಿಜ ಕನಸುಗಳು’ ತಡೆ ತೆರವು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2022, 20:15 IST
Last Updated 8 ಡಿಸೆಂಬರ್ 2022, 20:15 IST
Tippu Nijakanasugalu stay vacate
Tippu Nijakanasugalu stay vacate   

ಬೆಂಗಳೂರು: ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ವಿರಚಿತ, ‘ಟಿಪ್ಪು ನಿಜ ಕನಸುಗಳು’ ಕೃತಿ ಮಾರಾಟ ಮತ್ತು ಹಂಚಿಕೆಗೆ ವಿಧಿಸಿದ್ದ ತಾತ್ಕಾಲಿಕ ತಡೆಯನ್ನು ನಗರದ 14ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ತೆರವು
ಗೊಳಿಸಿದೆ. ಈ ಸಂಬಂಧ ಜಿಲ್ಲಾ ವಕ್ಫ್ ಬೋರ್ಡ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಬೆಂಗಳೂರಿನ ನಿವಾಸಿ ಬಿ.ಎಸ್. ರಫೀವುಲ್ಲಾ ದಾಖಲಿಸಿದ್ದ ಅಸಲು ದಾವೆಯಲ್ಲಿ ಮಧ್ಯಂತರ ಮನವಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಜೆ.ಆರ್. ಮೆಂಡೋನ್ಕಾ 2022ರ ನವೆಂಬರ್‌ 21ರಂದು ತಾತ್ಕಾಲಿಕ ತಡೆ ನೀಡಿದ್ದರು.

‘ಟಿಪ್ಪು ನಿಜ ಕನಸುಗಳು’ ಪುಸ್ತಕವನ್ನು ಆನ್‌ಲೈನ್‌ ಸೇರಿದಂತೆ ಎಲ್ಲಿಯೂ ಮಾರಾಟ ಮತ್ತು ಹಂಚಿಕೆ ಮಾಡದಂತೆ ತಾತ್ಕಾಲಿಕ ತಡೆ ನೀಡಿದ್ದರು. ವಿಸ್ತೃತ ಆದೇಶ ಇನ್ನಷ್ಟೇ ಹೊರಬೀಳಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT