ADVERTISEMENT

ಪಠ್ಯದಲ್ಲಿ ಟಿಪ್ಪು ಅಧ್ಯಾಯಕ್ಕೆ ಕೊಕ್‌: ಉಪಚುನಾವಣೆ ನಂತರವಷ್ಟೇ ವರದಿ?

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 20:00 IST
Last Updated 17 ನವೆಂಬರ್ 2019, 20:00 IST
   

ಬೆಂಗಳೂರು: ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್‌ ಅಧ್ಯಾಯವನ್ನು ತೆಗೆದು ಹಾಕುವ ಸಂಬಂಧ ಇತಿಹಾಸ ತಜ್ಞರ ಸಮಿತಿ ಉಪಚುನಾವಣೆಗಿಂತ ಮೊದಲು ವರದಿ ಸಲ್ಲಿಸುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ಇದೇ 7ರಂದು ನಡೆದ ಸಭೆಯಲ್ಲಿ ತಜ್ಞರ ಸಮಿತಿಗೆ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಪರಿಶೀಲನೆಗೆ ಕನಿಷ್ಠ ಒಂದು ತಿಂಗಳು ಬೇಕು ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಚುನಾವಣೆ ಕೊನೆಗೊಳ್ಳುವುದಕ್ಕೆ ಮೊದಲಾಗಿ ಈ ಸೂಕ್ಷ್ಮ ವಿಚಾರದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲಾರದು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT