ಬೆಂಗಳೂರು: ತಿರುಪತಿಯಲ್ಲಿ ಸುಮಾರು 15 ವರ್ಷಗಳ ಕಾಲ ಇದ್ದ ಕಾನೂನು ತೊಡಕುಗಳು ಎಲ್ಲಾ ಮುಗಿದಿದ್ದು ಸರ್ಕಾರದ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಹಸಿರು ನಿಶಾನೆ ದೊರೆತಿದೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಟಿಟಿಡಿ ಅಧ್ಯಕ್ಷರಾದ ಎಂ.ವಿ ಸುಬ್ಬಾರೆಡ್ಡಿ ಅವರ ಜೊತೆ ಶುಕ್ರವಾರ ಇಲ್ಲಿ ಔಪಚಾರಿಕವಾಗಿ ಚರ್ಚೆ ನಡೆಸಿದ ವೇಳೆ ಈ ವಿಷಯ ತಿಳಿಸಲಾಯಿತು.
ರಾಜ್ಯ ಸರ್ಕಾರ ತಿರುಪತಿಯಲ್ಲಿ ₹ 200 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಕಲ್ಯಾಣ ಮಂಟಪ ಮತ್ತು ವಸತಿ ಗೃಹಗಳ ಬಗ್ಗೆ ಚರ್ಚೆ ನಡೆಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.