ADVERTISEMENT

ತೋತಾಪುರಿ ಮಾವು ಮೇಲಿನ ನಿಷೇಧ ರದ್ದು ಕೋರಿ ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜೂನ್ 2025, 6:04 IST
Last Updated 12 ಜೂನ್ 2025, 6:04 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ಕರ್ನಾಟಕದ ತೋತಾಪುರಿ ಮಾವಿಗೆ ಹೇರಲಾದ ಪ್ರವೇಶ ನಿಷೇಧವನ್ನು ಹಿಂಡೆಯುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಿ, ಚಿತ್ತೂರು ಜಿಲ್ಲಾಧಿಕಾರಿಗೆ ಅಗತ್ಯ ನಿರ್ದೇಶನಗಳನ್ನು ನೀಡಿ, ಕೂಡಲೇ ನಿರ್ಬಂಧವನ್ನು ರದ್ದುಗೊಳಿಸಲು ಸೂಚಿಬೇಕು. ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ರೈತರ ಹಿತದೃಷ್ಟಿಯಿಂದ ಕೃಷಿ ಉತ್ಪನ್ನಗಳ ಸರಾಗ ಸಾಗಣೆಗೆ ಅವಕಾಶ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ADVERTISEMENT

ಪತ್ರದಲ್ಲಿ ಏನಿ?; ಕರ್ನಾಟಕ ಸೇರಿ ಬೇರೆ ರಾಜ್ಯಗಳಿಂದ ಬರುವ ತೋತಾಪುರಿ ಮಾವು ಪ್ರವೇಶವನ್ನು ನಿಷೇಧಿಸಿ ಚಿತ್ತೂರು ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಬಗ್ಗೆ ತೀವ್ರ ಕಳವಳಗೊಂಡಿದ್ದೇನೆ.

ಈ ಆದೇಶದ ಪಾಲನೆಗಾಗಿ ಕರ್ನಾಟಕ ಹಾಗೂ ತ‌ಮಿಳುನಾಡು ಅಂತರಾಜ್ಯ ಗಡಿಯ ಚೆಕ್​​ಪೋಸ್ಟ್​​ಗಳಲ್ಲಿ ಆಂಧ್ರ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಕೃಷಿ ಮಾರುಕಟ್ಟೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪತ್ರದಲ್ಲಿ ಮುಖ್ಯಮಂತ್ರಿ ವಿವರಿಸಿದ್ದಾರೆ.

ಈ ನಿಷೇಧದಿಂದ ಕರ್ನಾಟಕದ ಗಡಿ ಭಾಗದ ಮಾವು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ಗಡಿ ಭಾಗದ ರೈತರು ತಮ್ಮ ಮಾವು ಮಾರಾಟಕ್ಕೆ ಚಿತ್ತೂರನ್ನು ಬಹುವಾಗಿ ನೆಚ್ಚಿಕೊಂಡಿದ್ದಾರೆ. ಈ ನಿರ್ಬಂಧ ಆದೇಶದಿಂದ ಸರಬರಾಜು ಸರಪಳಿಗೆ ಅಡಚಣೆಯಾಗಿದ್ದು, ಮಾವು ಬೆಳೆ ನಷ್ಟದ ಆತಂಕ ಸೃಷ್ಟಿಸಿದೆ. ಇದರಿಂದ ಸಾವಿರಾರು ರೈತರ ಜೀವನೋಪಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ

ಯಾವುದೇ ಪೂರ್ವ ಸಮಾಲೋಚನೆ, ಸಮನ್ವಯತೆ ಮಾಡದೇ ಈ ರೀತಿಯ ಕಠಿಣ ಕ್ರಮ ಸಹಕಾರಿ ಒಕ್ಕೂಟ ವ್ಯವಸ್ಥೆಗೆ ಪೂರಕವಾಗಿಲ್ಲ.‌ ಇದರಿಂದ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುವ ಹಾಗೂ ಪ್ರತಿಕಾರದ ಕ್ರಮಗಳಿಗೆ ಆಸ್ಪದ ನೀಡುವ ಸಾಧ್ಯತೆ ಇದೆ. ಈಗಾಗಲೇ ಹಲವರು ಈ ಕ್ರಮದಿಂದ ಅಂತರರಾಜ್ಯ ತರಕಾರಿ ಮತ್ತು ಇತರ ಕೃಷಿ ಉತ್ಪನ್ನಗಳ ಸಾಗಣೆಗೆ ಅಡ್ಡಿ ಎದುರಾಗುವ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.