ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಅಧಿಸೂಚನೆ ಹೊರಡಿಸಿದೆ.
ಸ್ಥಳದಲ್ಲೇ ಭಾರಿ ದಂಡ ವಸೂಲು ಮಾಡುವ ಅಧಿಕಾರವನ್ನು ರಾಜ್ಯ ಸರ್ಕಾರ ಅಧಿಕಾರಿಗಳಿಗೆ ನೀಡಿದೆ.
ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಸಾರಿಗೆ ಇಲಾಖೆಯ ಮೋಟಾರು ಇನ್ಸ್ಪೆಕ್ಟರ್ ಮತ್ತು ಅದಕ್ಕಿಂತ ಮೇಲಿನ ಶ್ರೇಣಿಯಲ್ಲಿರುವ ಅಧಿಕಾರಿಗಳು, ಸಹಾಯಕ ಸಬ್ ಇನ್ಸ್ಪೆಕ್ಟರ್ (ಸಂಚಾರ), ಸಬ್ ಇನ್ಸ್ಪೆಕ್ಟರ್ (ಪೊಲೀಸ್ ಠಾಣೆಯ ಉಸ್ತುವಾರಿ), ಆಯಾ ಠಾಣಾ ವ್ಯಾಪ್ತಿಗಳಲ್ಲಿರುವ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ದಂಡ ವಿಧಿಸಲು ಅವಕಾಶ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.